ಹೂ ಬೆಳೆಗಾರರಿಗೆ ಅಳತೆಯಲ್ಲಿ ಮೋಸ ಮಾಡದಂತೆ ಕಟ್ಟುನಿಟ್ಟಿನ ಸೂಚನೆ.!

 

ಚಿತ್ರದುರ್ಗ: ಚಿತ್ರದುರ್ಗ ಕೃಷಿ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿರುವ ಸಗಟು ಹೂವಿನ ಮಾರುಕಟ್ಟೆಯಲ್ಲಿ ಹೂವುಗಳನ್ನು ಮಾರಾಟಕ್ಕಾಗಿ ತರುವ ಹೂ ಬೆಳೆಗಾರರು ಹೂವಿನ ಅಳತೆಯಲ್ಲಿ ರೈತರಿಗೆ ಮೋಸವಾಗುತ್ತಿರುವ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ದೂರಿಗೆ ಸಂಬಂಧಿಸಿದಂತೆ ಈಚೆಗೆ ಎ.ಪಿ.ಎಂ.ಸಿ. ಕಾರ್ಯದರ್ಶಿ ಬಿ.ಎಲ್.ಕೃಷ್ಣಪ್ಪ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿರ್ದೇಶಕ ಎಂ. ಗುರುಪ್ರಸಾದ್ ಸಮ್ಮುಖದಲ್ಲಿ ಹೂ ಬೆಳೆಗಾರರು ಮತ್ತು ಹೂವಿನ ಸಗಟು ವರ್ತಕರ ಸಭೆ ನಡೆಸಲಾಯಿತು.

ಈ ಹಿಂದೆ ಅನೇಕ ಬಾರಿ ತಿಳಿಸಿದಂತೆ ಹೂವಿನ ಅಳತೆಯಲ್ಲಿ ಯಾವುದೇ ಕಾರಣಕ್ಕೆ ಮೋಸ ಮಾಡದಂತೆ ಕಟ್ಟುನಿಟ್ಟಾಗಿ ಹೂವಿನ ವರ್ತಕರಿಗೆ ತಿಳಿಸಲಾಗಿದ್ದು, ಈ ಸಂಬಂಧ ದೂರುಗಳು ಕಂಡು ಬಂದಲ್ಲಿ ಹೂವಿನ ವರ್ತಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

Advertisement

ಸಭೆಯಲ್ಲಿ ಎಪಿಎಂಸಿ ಕಾರ್ಯದರ್ಶಿ ಬಿ.ಎಲ್.ಕೃಷ್ಣಪ್ಪ, ಕಾನೂನು ಮಾಪನಶಾಸ್ತ್ರ ಇಲಾಖೆ ಸಹಾಯಕ ನಿರ್ದೇಶಕ ಎಂ.ಗುರುಪ್ರಸಾದ್, ಹೂ ಬೆಳೆಗಾರರು ಹಾಗೂ ಹೂವಿನ ವರ್ತಕರಾದ ತಿರುಮಲ  ಪ್ಲವರ್ ಸ್ಟಾಲ್ ಮಾಲೀಕರು, ಲಕ್ಷ್ಮೀಪ್ರಿಯ ಪ್ಲವರ್ ಸ್ಟಾಲ್ ಮಾಲೀಕರು, ಆದಿಶಕ್ತಿ ಪ್ಲವರ್ ಸ್ಟಾಲ್ ಮಾಲೀಕರು ಸೇರಿದಂತೆ ಸಗಟು ಹೂವಿನ ವರ್ತಕರು ಇದ್ದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement