ನವದೆಹಲಿ: ಅಪ್ರಾಪ್ತ ಬಾಲಕಿಯ ಸ್ತನಗಳನ್ನು ಹಿಡಿದುಕೊಳ್ಳುವುದು, ಪೈಜಾಮಾ ದಾರ ಎಳೆಯುವುದು ಮುಂತಾದ ಕೃತ್ಯಗಳು ಅತ್ಯಾಚಾರ ಅಥವಾ ಅತ್ಯಾಚಾರ ಪ್ರಯತ್ನವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ನ್ಯಾಯಪೀಠವು ತೀರ್ಪನ್ನು ತೀವ್ರವಾಗಿ ಟೀಕಿಸಿತು. ಇದು ಗಂಭೀರ ವಿಷಯ ಎಂದು ಅಭಿಪ್ರಾಯಪಟ್ಟಿತು. ತೀರ್ಪು ನೀಡಿದ ನ್ಯಾಯಾಧೀಶರ ಸಂವೇದನಾಶೀಲತೆಯನ್ನು ಎತ್ತಿ ತೋರಿಸಿತು.
ತೀರ್ಪಿನ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಇದು ತೀರ್ಪು ನೀಡಿದ ನ್ಯಾಯಾಧೀಶರ ಕಡೆಯಿಂದ ಸಂಪೂರ್ಣ ಸಂವೇದನಾಶೀಲತೆಯ ಕೊರತೆಯನ್ನು ತೋರಿಸುತ್ತದೆ ಎಂದು ಹೇಳಲು ನಮಗೆ ನೋವಾಗಿದೆ ಎಂದು ನ್ಯಾಯಪೀಠ ಹೇಳಿದೆ.