ಮಂಗಳೂರು: ವಿಷಾನಿಲ ಸೋರಿಕೆಯಿಂದ ಮಂಗಳೂರು ಹೊರವಲಯದ ಸುರತ್ಕಲ್ನ ಎಂಆರ್ಪಿಎಲ್ ಘಟಕದ ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ ಘಟನೆ ನಡೆದಿದೆ.
ದೀಪ ಚಂದ್ರ ಭಾರ್ತಿಯಾ ಮತ್ತು ಬಿಜಿಲ್ ಪ್ರಸಾದ್ ಸಾವನ್ನಪ್ಪಿದ ದುರ್ದೈವಿ. ಮಂಗಳೂರು ತೈಲ ಶುದ್ಧೀಕರಣ ಘಟಕದ ಆಯಿಲ್ ಮೂವ್ಮೆಂಟ್ ವಿಭಾಗದಲ್ಲಿ ಈ ದುರಂತ ಸಂಭವಿಸಿದೆ. ಆಯಿಲ್ ಮೂವ್ಮೆಂಟ್ ವಿಭಾಗದಲ್ಲಿ ದೋಷ ಕಂಡುಬಂದ ಹಿನ್ನೆಲೆ ಪರಿಶೀಲನೆಗೆಂದು ಸಿಬ್ಬಂದಿ ತೆರಳಿದ್ದರು.
ಟ್ಯಾಂಕ್ ಮೇಲ್ಛಾವಣಿಗೆ ಹೋದ ಬೆನ್ನಲ್ಲೇ ಇಬ್ಬರೂ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಿದರೂ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.