ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಕಣ್ಗೆ ಕಾಬಡೆ ರೂಪಲ್ಲ, ಕೈಗೆ ಸಿಲುಕವಡೆ ದೇಹಿಯಲ್ಲ.
ನಡೆವಡೆ ಗಮನಿಯಲ್ಲ, ನುಡಿವಡೆ ವಾಚಾಳನಲ್ಲ.
ನಿಂದಿಸಿದಡೆ ಹಗೆಯಲ್ಲ, ಹೊಗಳಿದವರಿಗೆ ಕೆಳೆಯಲ್ಲ.
ಗುಹೇಶ್ವರನ ನಿಲುವು ಮಾತಿನ ಮಾಲೆಗೆ ಸಿಲುಕುವುದೆ ?
ಸಿದ್ಧರಾಮಯ್ಯ ನೀನು ಮರುಳಾದೆಯಲ್ಲಾ
-ಅಲ್ಲಮಪ್ರಭುದೇವರು

































