ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಅಂಜಬೇಡ ಅಳುಕಬೇಡ;
ಹೋದವರಾರು ಇದ್ದವರಾರು ? ಎಲೆ ಮರುಳೆ !
ಒಂದು ಮುಖದಲ್ಲಿಪ್ಪ ದೇವನೊಬ್ಬನೆ.
ಹಲವು ಮುಖದಲ್ಲಿಪ್ಪ ದೇವನೊಬ್ಬನೆ.
ನಾಮ ಹಲವಲ್ಲದೆ ಕಾರ್ಯ ಒಂದೇ ನೋಡಾ !
ಮನದೊಳಗಣ ಘನವು ತನುವನಗಲುವುದೆ ?
ಗುಹೇಶ್ವರಲಿಂಗದಲ್ಲಿ ವಿಯೋಗಕ್ಕೆ ತೆರಹಿಲ್ಲ ಕೇಳಾ, ಸಂಗನಬಸವಣ್ಣ.
-ಅಲ್ಲಮಪ್ರಭುದೇವರು
































