ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಸ್ಥಾವರಭಕ್ತಂಗೆ ಸೀಮೆಯಲ್ಲದೆ
ಘನಲಿಂಗಜಂಗಮಕ್ಕೆ ಸೀಮೆಯೆಲ್ಲಿಯದು
ಅಂಬುಧಿಗೆ ಸೀಮೆಯಲ್ಲದೆ
ಹರಿವ ನದಿಗೆ ಸೀಮೆಯೆಲ್ಲಿಯದು
ಭಕ್ತಂಗೆ ಸೀಮೆಯಲ್ಲದೆ
ಜಂಗಮಕ್ಕೆ ಸೀಮೆಯುಂಟೆ
ಕೂಡಲಸಂಗಮದೇವಾ.
-ಬಸವಣ್ಣ































