ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಬೆಲ್ಲದ ನೀರೆರೆದಡೇನು, ಬೇವು ಸಿಹಿಯಪ್ಪುದೆ
ಕತ್ತುರಿಯ ಲೇಪನವಿತ್ತಡೇನು, ನೀರುಳ್ಳೆಯ ದುರ್ಗಂಧ ದೂರಪ್ಪುದೆ ?
ಕಸುಗಾಯ ಹಿಸುಕಿದಡೇನು, ಹಣ್ಣಿಗೆ ಹವಣಪ್ಪುದೆ ?
ಕಿರಿಯ ಮನದ ಮಾನವಂಗೆ ಬಹಿರಂಗದ ಬರಿಯ ಸಂಸ್ಕಾರವಾದಡೇನು,
ಭವಿಯಾಗಿಪ್ಪನಲ್ಲದೆ ಭಕ್ತನಪ್ಪನೆ ಕೂಡಲಚೆನ್ನಸಂಗಮದೇವಾ
ಪೂರ್ವಗುಣವಳಿದು ಪುನರ್ಜಾತನಾಗದನ್ನಕ್ಕ ?
-ಚೆನ್ನಬಸವಣ್ಣ

































