ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಕಂಡು ಅರ್ಪಿಸುವುದು ಬ್ರಹ್ಮತತ್ವ.
ಸಂದೇಹದಲ್ಲಿ ಅರ್ಪಿಸುವುದು ವಿಷ್ಣುತತ್ವ.
ಬಂಧಮೋಕ್ಷಕರ್ಮಗಳಿಲ್ಲವೆಂದು ಅರ್ಪಿಸುವುದು ರುದ್ರತತ್ವ.
ತತ್ವಂಗಳ ಗೊತ್ತ ಮುಟ್ಟದೆ ನಿಶ್ಚಯವಾದ ಪರಿಪೂರ್ಣಂಗೆ
ಉತ್ಪತ್ತಿ ಸ್ಥಿತಿ ಲಯವೆಂಬುದು ಇತ್ತಲೇ ಉಳಿಯಿತ್ತು,
ಕಾಮಧೂಮ ಧೂಳೇಶ್ವರನ ಮುಟ್ಟಲಿಲ್ಲವಾಗಿ.
-ಮಾದಾರ ಧೂಳಯ್ಯ

































