ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಶಿಷ್ಯನಿಲ್ಲದಡೆ ಗುರು ಎಲ್ಲಿಹನಯ್ಯಾ?
ಪೂಜಕನಿಲ್ಲದಡೆ ಲಿಂಗವೆಲ್ಲಹುದಯ್ಯಾ?
ಭಕ್ತನಿಲ್ಲದಡೆ ಜಂಗಮವ್ಲೆಹನಯ್ಯಾ?
ಜಲವಿಲ್ಲದಡೆ ಪಾದೋದಕವೆಲ್ಲಹುದಯ್ಯಾ?
ಧೇನುವಿಲ್ಲದಡೆ ಭೂತಿಯೆಹುದಯ್ಯಾ?
ತ್ರೈಪುರವಿಲ್ಲದಡೆ ರುದ್ರಾಕ್ಷಿಗಳೆಲ್ಲಿಹವಯ್ಯಾ?
ವರ್ಣಂಗಳಿಲ್ಲದಡೆ ಮಂತ್ರಂಗಳೆಲ್ಲಿಹವಯ್ಯಾ?
ನಾನಿಲ್ಲದಡೆ ನೀನೆಲ್ಲಿಯವನಯ್ಯಾ?
ಇವೆಲ್ಲ ಭಾವಭ್ರಮೆಯಲ್ಲದೆ,
ನಿರ್ಭಾವ ನಿಜಾನಂದ ತೂರ್ಯಾತೀತ ಪರವಸ್ತುವಿನ ಕೂಟದಲ್ಲಿ
ಆನು ನೀನೆಂಬುಭಯ ಭಾವ ಇದ್ದಡೆ ತೋರ ಬಾರಾ,
ಮಾರಹರ ಧೀರ ಗಂಭೀರ ಕಪಿಲಸಿದ್ಧಮಲ್ಲಿಕಾರ್ಜುನವೀರ.
-ಸಿದ್ಧರಾಮೇಶ್ವರ































