ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಕಾಲಲ್ಲಿ ಕಟ್ಟಿದ ಸಡ್ಡೆಯ ಕೀಳುವರಿಲ್ಲ.
ಕೈಯಲ್ಲಿ ಹಿಡಿದ ಮೊರನ ಬೇಡಾ ಎಂಬವರಿಲ್ಲ.
ತಲೆಯಲ್ಲಿ ಹೊತ್ತ ಕೊಂಗವ ಇಳುಹುವರಿಲ್ಲ.
ಸಡ್ಡೆಗೆ ಮೂರು ಕವೆ. ಒಂದೆ ಚಿತ್ತವಟ್ಟ.
ಮೊರಕೆ ಮೂರು ಗೋಟು,
ಮಾಡುವಾಕೆ ಒಬ್ಬಳೆ.
ಕೊಂಗಕ್ಕೆ ಎರಡು ಗೋಟು, ತೂರುವರು ಮೂವರು.
ರಾಶಿವೊಂದೆ, ಕೊಳಗ ಎರಡು, ಅಳೆವರು ಲೆಕ್ಕಕ್ಕೆ ಕಡೆಯಿಲ್ಲ.
ಇದ ಕೇಳಿಹರೆಂದಂಜಿ, ಅಲೇಖನಾದ ಶೂನ್ಯ ಕಲ್ಲಿನೊಳಹೊಕ್ಕ.
-ವಚನಭಂಡಾರಿ ಶಾಂತರಸ































