ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಕಂಥೆಯ ಕಟ್ಟಿ, ತಿತ್ತಿಯ ಹೊತ್ತು,
ಮರಿಯ ನಡಸುತ್ತ , ದೊಡ್ಡೆಯ ಹೊಡೆವುತ್ತ ,
ಅಡ್ಡಗೋಲಿನಲ್ಲಿ ಹೋಹ ಚುಕ್ಕಿ ಬೊಟ್ಟಿನವ ತಿಟ್ಟುತ್ತ ,
ಹಿಂಡನಗಲಿ ಹೋಹ ದಿಂಡೆಯ ಮಣೆಘಟ್ಟನ ಅಭಿಸಂದಿಯ ಕೋಲಿನಲ್ಲಿಡುತ್ತ.
ಈ ಹಿಂಡಿನೊಳಗೆ ತಿರುಗಾಡುತಿದ್ದೇನೆ.
ಈ ವಿಕಾರದ ಹಿಂಡ ಬಿಡಿಸಿ,
ನಿಜನಿಳಯ ನಿಮ್ಮಂಗವ ತೋರಿ, ಸುಸಂಗದಲ್ಲಿರಿಸು,
ಎನ್ನೊಡೆಯ ವೀರಬೀರೇಶ್ವರಲಿಂಗಾ.
-ವೀರ ಗೊಲ್ಲಾಳ/ಕಾಟಕೋಟ

































