ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ
ವಚನ:
ಕಾಲಲ್ಲಿ ಕಟ್ಟಿದ ಸಡ್ಡೆಯ ಕೀಳುವರಿಲ್ಲ.
ಕೈಯಲ್ಲಿ ಹಿಡಿದ ಮೊರನ ಬೇಡಾ ಎಂಬವರಿಲ್ಲ.
ತಲೆಯಲ್ಲಿ ಹೊತ್ತ ಕೊಂಗವ ಇಳುಹುವರಿಲ್ಲ.
ಸಡ್ಡೆಗೆ ಮೂರು ಕವೆ. ಒಂದೆ ಚಿತ್ತವಟ್ಟ.
ಮೊರಕೆ ಮೂರು ಗೋಟು,
ಮಾಡುವಾಕೆ ಒಬ್ಬಳೆ.
ಕೊಂಗಕ್ಕೆ ಎರಡು ಗೋಟು, ತೂರುವರು ಮೂವರು.
ರಾಶಿವೊಂದೆ, ಕೊಳಗ ಎರಡು, ಅಳೆವರು ಲೆಕ್ಕಕ್ಕೆ ಕಡೆಯಿಲ್ಲ.
ಇದ ಕೇಳಿಹರೆಂದಂಜಿ, ಅಲೇಖನಾದ ಶೂನ್ಯ ಕಲ್ಲಿನೊಳಹೊಕ್ಕ.
-ವಚನಭಂಡಾರಿ ಶಾಂತರಸ
 
				 
         
         
         
															 
                     
                     
                     
                     
                    


































 
    
    
        