‘ಜನರಿಗೆ ಕಾಂಗ್ರೆಸ್ ಸರಕಾರದ ಹಗಲುದರೋಡೆಯ ಮನವರಿಕೆ’- ವಿಜಯೇಂದ್ರ

WhatsApp
Telegram
Facebook
Twitter
LinkedIn

ಬೆಂಗಳೂರು :ದರಿದ್ರ- ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ ನಿರಂತರವಾಗಿ ಇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಜನರ ವಿಶ್ವಾಸ ಮತ್ತು ಆಶೀರ್ವಾದ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೀಗ ಎಲ್ಲವನ್ನೂ ಗಾಳಿಗೆ ತೂರಿ ರೈತರು, ಬಡವರು, ಜನಸಾಮಾನ್ಯರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದರ ಬಗ್ಗೆ ನೋವಿದೆ ಎಂದು ತಿಳಿಸಿದರು.

40 ಶೇಕಡಾ ಸರಕಾರ ಎಂದು ಬಿಜೆಪಿಯನ್ನು ಕರೆದಿದ್ದರು. ಅದಕ್ಕೆ ಪುರಾವೆ ಇಲ್ಲ. ನಾವು ಮುಗ್ಗರಿಸಿದ್ದೂ ಆಗಿದೆ. ಬಿಜೆಪಿ ನಿರಂತರ ಹೋರಾಟ ಮಾಡುವ ಮೂಲಕ ಈ ಸರಕಾರಕ್ಕೆ ತಕ್ಕ ಶಾಸ್ತಿ ಮಾಡಲಿದೆ ಎಂದು ನುಡಿದರು.

ಕಳಚಿ ಬಿದ್ದ ಸಿದ್ದರಾಮಯ್ಯನವರ ಮುಖವಾಡ..
ಸಿದ್ದರಾಮಯ್ಯನವರು ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಆನೆ ನಡೆದಿದ್ದೇ ದಾರಿ ಎಂಬಂತೆ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಕಪಟ ಸಮಾಜವಾದಿ ಮುಖವಾಡ ಈ ಅಧಿಕಾರಾವಧಿಯಲ್ಲಿ ಕಳಚಿ ಬಿದ್ದಿದೆ ಎಂದು ವಿಜಯೇಂದ್ರ ಅವರು ವಿವರಿಸಿದರು.ಹಿಂದೆ ಬಿಜೆಪಿ ಸರಕಾರ ಅತ್ಯುತ್ತಮವಾಗಿ ಕೆಲಸ ಮಾಡಿದ್ದರೂ ಸಹ ಅಂದಿನ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ಸಿಗರು ಸಾಕಷ್ಟು ಅಪಪ್ರಚಾರ ಮಾಡಿದರು. ಜನರ ಒಳಿತಿಗಾಗಿ ಈ ಸರಕಾರ ಬಂದಿಲ್ಲ; ಜನರ ಒಳಿತಿಗಾಗಿ ಅಧಿಕಾರ ಪಡೆದಿದ್ದರೆ ಇಂಥ ದರಿದ್ರ ಸರಕಾರವನ್ನು ಜನತೆ ನೋಡಬೇಕಿರಲಿಲ್ಲ ಎಂದು ವಿಶ್ಲೇಷಿಸಿದರು.ಹೈಕಮಾಂಡ್ ಅಥವಾ ಗಾಂಧಿ ಕುಟುಂಬಕ್ಕೆ ಕರ್ನಾಟಕ ರಾಜ್ಯವನ್ನು ಅಡ ಇಡಲು ಮತ್ತು ಚುನಾವಣೆ ವೇಳೆ ಎಟಿಎಂ ಆಗಿ ಪರಿವರ್ತಿಸಲು ಕಾಂಗ್ರೆಸ್ಸಿಗೆ ಇಲ್ಲಿ ಸರಕಾರ ಬೇಕಿದೆ ಎಂದು ಟೀಕಿಸಿದರು.

ಜನಜಾಗೃತಿ ಮೂಡಿಸಲು ಜನಾಕ್ರೋಶ ಯಾತ್ರೆ..
ರಾಜ್ಯದಲ್ಲಿ ತೀವ್ರ ಬೆಲೆ ಏರಿಕೆ ಮತ್ತು ಸರಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ 4 ಮೀಸಲಾತಿ, ಪರಿಶಿಷ್ಟ ಜಾತಿ, ಜನಾಂಗದ ಅಭ್ಯುದಯಕ್ಕೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಹಣ ದುರ್ಬಳಕೆ- ಇವೆಲ್ಲವನ್ನೂ ರಾಜ್ಯದ ಜನತೆ ಮುಂದೆ ತೆಗೆದುಕೊಂಡು ಹೋಗುತ್ತೇವೆ. ನಿನ್ನೆ ಆರಂಭವಾದ ಅಹೋರಾತ್ರಿ ಧರಣಿಯ ಹೋರಾಟವು ಏ.7ರಿಂದ ಪ್ರಾರಂಭವಾಗುವ ಜನಾಕ್ರೋಶ ಯಾತ್ರೆ ಮೂಲಕ ರಾಜ್ಯದ ಪ್ರತಿ ಜಿಲ್ಲೆಗೆ ತಲುಪಲಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರಕಾರದ ಹಗಲುದರೋಡೆಯನ್ನು ಜನರಿಗೆ ಮನದಟ್ಟು ಮಾಡುತ್ತೇವೆ. ಜನರ ಹಣ ಲೂಟಿ ಮಾಡಿ, ಜನರಿಗೆ ಬರೆ ಎಳೆದು ಅಧಿಕಾರ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ದೋಖಾಗಳನ್ನು ಜನರ ಮುಂದಿಡಲಿದ್ದೇವೆ ಎಂದು ಹೇಳಿದರು. ಈ ಸರಕಾರದ ನೈಜ ಮುಖವಾಡವನ್ನು ತಿಳಿಸುವ ಕೆಲಸವನ್ನು ಮುಂದಿನ ಒಂದು ತಿಂಗಳು ಮಾಡಲಿದ್ದೇವೆ ಎಂದರು.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - bcsuddi@gmail.com

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon