ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಮ್ಮ ಬಣದಿಂದ ಅಭ್ಯರ್ಥಿ ಹಾಕುವ ನಿರ್ಧಾರದಿಂದ ನಾವು ಹಿಂದೆ ಸರಿದಿಲ್ಲ. ರಾಜ್ಯಾಧ್ಯಕ್ಷರ ಚುನಾವಣೆಗೆ ನಾವು ಸ್ಪರ್ಧೆ ಮಾಡುತ್ತೇವೆ ಎಂದು ಯತ್ನಾಳ್ ಟೀಂನ ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದ ವಿದ್ಯಮಾನಗಳ ಬಗ್ಗೆ ನಾವು ಹೈಕಮಾಂಡ್ ಮಾಹಿತಿ ಕೊಟ್ಡಿದ್ದೇವೆ. ನಮ್ಮ ನಿರ್ಧಾರದಿಂದ ನಾವು ಹಿಂದೆ ಸರಿಯಲ್ಲ. ಚುನಾವಣೆ ನಡೆದರೆ ನಾವು ಅಭ್ಯರ್ಥಿ ಹಾಕುತ್ತೇವೆ. ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗೇ ಆಗುತ್ತದೆ ಎಂದು ವಿಜಯೇಂದ್ರಗೆ ತಿರುಗೇಟು ನೀಡಿದ್ದಾರೆ.
ಚುನಾವಣೆ ಉಸ್ತುವಾರಿ ಶಿವರಾಜ್ ಸಿಂಗ್ ಚೌಹಾಣ್ ಬರೋ ದಿನ ಇನ್ನು ಅಂತಿಮವಾಗಿಲ್ಲ. ಚುನಾವಣೆ ವೇಳಾಪಟ್ಟಿ ಸಿದ್ಧವಾಗಬೇಕು. ದೆಹಲಿ ಚುನಾವಣೆ ಆದ ಮೇಲೆ ವರಿಷ್ಠರು ನಮ್ಮ ಜೊತೆ ಮಾತಾಡೋದಾಗಿ ಹೇಳಿದ್ದಾರೆ. ಕರ್ನಾಟಕಕ್ಕೆ ನೂರಕ್ಕೆ ನೂರು ಬದಲಾವಣೆ ಆಗೇ ಆಗುತ್ತದೆ. ಚುನಾವಣೆ ನಡೆಯುವ ಸನ್ನಿವೇಶ ಬಂದರೆ ನಾಮಪತ್ರ ಸಲ್ಲಿಕೆ ಮಾಡೋ ಅವಶ್ಯಕತೆ ಬಂದರೆ ನಾವು ನಾಮಪತ್ರ ಸಲ್ಲಿಕೆ ಮಾಡುತ್ತೇವೆ ಎಂದರು.