ಜೀ ಕನ್ನಡದ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ 9 ವರ್ಷ ತೀರ್ಪುಗಾರರಾಗಿ ಕಾಣಿಸಿಕೊಂಡ ನಟಿ ರಕ್ಷಿತಾ ದಿಢೀರ್ ಗುಡ್ಬೈ ಹೇಳಿದ್ದಾರೆ.
ಜೀ ಕನ್ನಡ ವಾಹಿನಿಯ ರಿಯಾಲಿಟಿ ಶೋಗಳಲ್ಲಿ ಮಿಂಚುತ್ತಿದ್ದ ರಕ್ಷಿತಾ ಅವರ ಈ ದಿಢೀರ್ ನಿರ್ಧಾರದಿಂದ ಅಭಿಮಾನಿಗಳು ಆಘಾತಕ್ಕೆ ಒಳಗಾಗಿದ್ದಾರೆ. ಇದಕ್ಕೆ ಕಾರಣವೇನು ಎಂದು ರಕ್ಷಿತಾ ಪ್ರೇಮ್ ತಮ್ಮ ಇನ್ಸ್ಟಾಗ್ರಾಂ ನಲ್ಲಿ ಬಹಿರಂಗಪಡಿಸಿದ್ದಾರೆ.
ಕನ್ನಡದ ಜನಪ್ರಿಯ ರಿಯಾಲಿಟಿ ಶೋಗಳಾದ “ಕಾಮಿಡಿ ಕಿಲಾಡಿಗಳು” ಹಾಗೂ “ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್” ಇದರಲ್ಲಿ ರಕ್ಷಿತಾ ತೀರ್ಪುಗಾರರಾಗಿ ಹಲವು ವರ್ಷಗಳಿಂದ ಕಾಣಿಸಿಕೊಂಡಿದ್ದರು. ಈ ಶೋಗಳ ಹಲವು ಸೀಸನ್ಗಳಲ್ಲಿಯೂ ಸತತವಾಗಿ ರಕ್ಷಿತಾ ಅವರೇ ಜಡ್ಜ್ ಆಗಿದ್ದರು. ಆದರೆ ಇನ್ನು ಮುಂದೆ ನಾನು ಈ ಕಾರ್ಯಕ್ರಮಗಳ ಹಾಗೂ ಆ ವಾಹಿನಿಯ ಭಾಗವಲ್ಲ ಎಂದು ಹೇಳಿದ್ದಾರೆ.
ನಿರ್ದಿಷ್ಟ ಕಾರ್ಯಕ್ರಮದಲ್ಲಿ ನನ್ನನ್ನ ನಿರೀಕ್ಷೆ ಮಾಡುತ್ತಿದ್ದೀರಿ. ಆದರೆ, ಕಳೆದ 9 ವರ್ಷಗಳಿಂದ ನಾನು ಕೆಲಸ ಮಾಡಿದ್ದ ಚಾನೆಲ್ನಲ್ಲಿ ನಾನು ಈಗ ಇಲ್ಲ. ಜೀವನದಲ್ಲಿ ಬದಲಾವಣೆ ಬೇಕು. ನನ್ನ ಕರ್ಟ್ ಝನ್ನಿಂದ ನಾನು ಹೊರಗೆ ಬರಬೇಕು. ಹೊಸದನ್ನೇನಾದರೂ ಟೈ ಮಾಡಬೇಕು. ಹೀಗಾಗಿ, ನಾನು ಡ್ಯಾನ್ಸ್ ಶೋನಲ್ಲೂ ಭಾಗಿಯಾಗುತ್ತಿಲ್ಲ. ವೀಕ್ಷಕರು ಇಲ್ಲಿಯವರೆಗೂ ನನಗೆ ತೋರಿದ ಪ್ರೀತಿಗೆ ನಾನು ಚಿರಋಣಿ, ನಾನು ಅಲ್ಲಿ ಕಳೆದ ಸುಂದರ ಕ್ಷಣಗಳನ್ನು ಮರೆಯಲು ಸಾಧ್ಯವಿಲ್ಲ. ಎಲ್ಲರ ಆಶೀರ್ವಾದದೊಂದಿಗೆ ಸರಿಯಾದ ದಾರಿಯಲ್ಲಿ ಮುನ್ನಡೆಯುತ್ತಿದ್ದೇನೆ. ನಾನು ವಾಪಸ್ ಬಂದಾಗ ಅದೇ ಪ್ರೀತಿ ತೋರಿಸುತ್ತೀರಾ ಎಂಬ ಭರವಸೆ ಇದೆ. ಧನ್ಯವಾದಗಳು ಎಂದು ಇನ್ಸಾಗ್ರಾಮ್ ನಲ್ಲಿ ರಕ್ಷಿತಾ ಪ್ರೇಮ್ ಬರೆದುಕೊಂಡಿದ್ದಾರೆ.































