ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ಗೆ ಮಹಿಳೆಯೊಬ್ಬರು ಲವ್ ಲೆಟರ್ ಬರೆದಿದ್ದು, ಮಹಿಳೆ ಕಾಟಕ್ಕೆ ಬೇಸತ್ತ ಇನ್ಸ್ಪೆಕ್ಟರ್ ಎಫ್ಐಆರ್ ದಾಖಲು ಮಾಡಿದ್ದಾರೆ.
ಇನ್ಸ್ಪೆಕ್ಟರ್ ಸತೀಶ್ ಅವರಿಗೆ ರಾಮಮೂರ್ತಿ ನಗರ ನಿವಾಸಿ ಮಹಿಳೆ ವನಜಾ ಎನ್ನುವವರು ಪದೇ ಪದೇ ಲವ್ ಲೆಟರ್ ಬರೆಯುತ್ತಿದ್ದರು. ಇನ್ಸ್ಪೆಕ್ಟರ್ ಠಾಣೆಯಲ್ಲಿ ಇಲ್ಲದ ವೇಳೆ ಠಾಣೆಗೆ ಬಂದು ಇನ್ಸ್ಪೆಕ್ಟರ್ ಟೇಬಲ್ ಮೇಲೆ ಲವ್ ಲೆಟರ್ ಜೊತೆಗೆ ಕಜ್ಜಾಯದ ಡಬ್ಬಿ, ಹೂ ಬೊಕ್ಕೆ ಹಾಗೂ ಅಲ್ಲದೇ ಇಪ್ಪತ್ತು ಮಾತ್ರೆಗಳನ್ನು ಇಟ್ಟು ಹೋಗಿದ್ದರು.
ಪ್ರೇಮ ಪತ್ರದಲ್ಲಿ ನೀವು, ನನ್ನ ಪ್ರೀತಿಯನ್ನು ಒಪ್ಪುತ್ತಿಲ್ಲ, ನಿಮಗೆ ತೊಂದರೆ ಕೊಡಲು ನನಗೆ ಇಷ್ಟ ಇಲ್ಲ. ನೀವು ನನ್ನ ಪ್ರೀತಿ ಒಪ್ಪಿಕೊಳ್ಳದಿದ್ದರೆ, ನಾನು ಆತ್ಮಹತ್ಯೆ ಮಾಡಿಕೊಳ್ತುತ್ತೇನೆ. ನನ್ನ ಸಾವಿಗೆ ನೀವೆ ಕಾರಣ ಎಂದು ಹಾರ್ಟ್ ಚಿತ್ರ ಬರೆದು ಅದರಲ್ಲಿ ಚಿನ್ನಿ ಲವ್ ಯೂ, ಯೂ ಮಸ್ಟ್ ಲವ್ ಮೀ ಎಂದು ರಕ್ತದಲ್ಲಿ ಪತ್ರ ಬರೆದಿದ್ದಾಳೆ.
ಮಹಿಳೆ ಪತ್ರ ಬರೆಯುವ ಮುನ್ನ ಮೊಬೈಲ್ಗೆ ಸಾಕಷ್ಟು ಬಾರಿ ಮೆಸೇಜ್ ಮಾಡುತ್ತಿದ್ದಳು. ಇದರಿಂದ ಬೇಸತ್ತು ಇನ್ಸ್ಪೆಕ್ಟರ್ ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಾರೆ. ಹತ್ತಕ್ಕೂ ಹೆಚ್ಚು ನಂಬರ್ಗಳಿAದ ಮೆಸೆಜ್ ಮಾಡಿದ್ದರಿಂದ ಅಷ್ಟೂ ನಂಬರ್ಗಳನ್ನೂ ಇನ್ಸ್ಪೆಕ್ಟರ್ ಬ್ಲಾಕ್ ಮಾಡಿದ್ದಾರೆ. ಫೋನ್ ನಂಬರ್ಗಳನ್ನು ಬ್ಲಾಕ್ ಮಾಡಿದ್ದಕ್ಕೆ ಇದೀಗ ಪತ್ರ ಬರೆದಿದ್ದಾಳೆ.
ತಾನು ಕಾಂಗ್ರೆಸ್ ಕಾರ್ಯಕರ್ತೆ ಎಂದು ಹೇಳಿಕೊಂಡಿದ್ದ ಮಹಿಳೆ, ಮೋಟಮ್ಮ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗಿರುವ ಫೋಟೋ ಕಳುಹಿಸಿ ಪ್ರೀತಿಸಲೇ ಬೇಕು ಎಂದು ಒತ್ತಡ ಹಾಕಿದ್ದಾಳೆ. ಮಹಿಳೆ ಕಾಟಕ್ಕೆ ಬೇಸತ್ತು, ಇನ್ಸ್ಪೆಕ್ಟರ್ ಮಹಿಳೆ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಕರ್ತವ್ಯಕ್ಕೆ ಅಡ್ಡಿ, ಆತ್ಮಹತ್ಯೆ ಬೆದರಿಕೆ ಆರೋಪದಲ್ಲಿ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
































