ಕುಡಿದ ಅಮಲಿನಲ್ಲಿ ಪೊಲೀಸ್ ಠಾಣೆಯಲ್ಲಿ ಗಲಾಟೆ ಜೈಲರ್ ವಿಲನ್ ವಿನಾಯಕನ್ ಅರೆಸ್ಟ್

WhatsApp
Telegram
Facebook
Twitter
LinkedIn

ಕೊಚ್ಚಿ: ರಜನಿಕಾಂತ್ ಅಭಿನಯದ ಜೈಲರ್ ಸಿನೆಮಾದಲ್ಲಿ ಮನೋಜ್ಞ ಅಭಿನಯ ಮಾಡಿ ಎಲ್ಲರ ಮನಗೆದ್ದಿದ್ದ ಚಿತ್ರದ ಖಳನಾಯಕ ವಿನಾಯಕನ್ ಇದೀಗ ನಿಜ ಜೀವನದಲ್ಲಿ ಖಳನಾಯಕನಾಗಲು ಹೋಗಿ ಅರೆಸ್ಟ್ ಆದ ಘಟನೆ ನಡೆದಿದೆ.

ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರದಲ್ಲಿ ಖಳನಾಯಕನಾಗಿ ನಟಿಸಿದ್ದ ನಟ ವಿನಾಯಕನ್ ಅವರನ್ನು ಎರ್ನಾಕುಲಂ ಉತ್ತರ ಪೊಲೀಸರು ಮಂಗಳವಾರ ಠಾಣೆಯಲ್ಲಿ ಗದ್ದಲ ಸೃಷ್ಟಿಸಿದ ಆರೋಪದ ಮೇಲೆ ಬಂಧಿಸಿದ್ದಾರೆ. ಅವರನ್ನು ಎರ್ನಾಕುಲಂ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯಕೀಯ ಪರೀಕ್ಷೆ ಪೂರ್ಣಗೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅವರು ವಾಸವಾಗಿರುವ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿ ಜತೆಗಿನ ವಿವಾದ ಇತ್ಯರ್ಥಗೊಳಿಸಲು ವಿನಾಯಕನ್ ಅವರನ್ನು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಿದ್ದಕ್ಕಾಗಿ ನಟ ವಿನಾಯಕನ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ನಂತರ ನಟ ವಿನಾಯಕನ್ ಅವರನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಜಾಮೀನು ಮೇಲೆ ಬಿಡುಗಡೆಗೊಂಡ ಬಳಿಕ ವರದಿಗಾರರೊಂದಿಗೆ ಪ್ರತಿಕ್ರಿಯಿಸಿದ ವಿನಾಯಕನ್, ತನ್ನನ್ನು ಏಕೆ ಬಂಧಿಸಲಾಯಿತು ಎಂಬುದು ನನಗೆ ಗೊತ್ತಿಲ್ಲ. ನಾನು ಇಲ್ಲಿಗೆ ದೂರು ನೀಡಲು ಬಂದಿದ್ದೆ. ಆದರೆ ನನ್ನನ್ನು ಬಂಧಿಸಿ ಆಸ್ಪತ್ರೆಗೆ ಏಕೆ ಕರೆದೊಯ್ಯಲಾಯಿತು ಎಂಬುದನ್ನು ಪೊಲೀಸರನ್ನೇ ಕೇಳಿ ಎಂದು ಹೇಳಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon