ಸಿನಿಮಾಕಾರ್ಮಿಕರಿಗಾಗಿ ಹೊಸ ವೇತನ ಜಾರಿ – ಸಿನಿ ಕಾರ್ಮಿಕರ ಪರ ನಿಂತ ಚಿತ್ರರಂಗ

WhatsApp
Telegram
Facebook
Twitter
LinkedIn

ನಿರ್ಮಾಪಕ ಕೆ ಮಂಜು ಅಧ್ಯಕ್ಷತೆಯ 36 ಮಂದಿ ನಿರ್ಮಾಪಕರನ್ನು ಒಳಗೊಂಡ ಸಮಿತಿಯಿಂದ ಹೊಸ ವೇತನ ಪರಿಷ್ಕರಣೆ ವರದಿಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘಕ್ಕೆ ಹಸ್ತಾಂತರ ಮಾಡಲಾಯಿತು. ಕೊರೋನಾ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ ಕಳೆದ ನಾಲ್ಕು ವರ್ಷಗಳಿಂದ ಸಿನಿಮಾ ಕಾರ್ಮಿಕರ ವೇತನ ಪರಿಷ್ಕರಣೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ನಿರ್ಮಾಪಕ ಕೆ ಮಂಜು ಅಧ್ಯಕ್ಷತೆಯಲ್ಲಿ 36 ಕ್ಕೂ ಹೆಚ್ಚು ನಿರ್ಮಾಪಕರನ್ನು ಒಳಗೊಂಡ ಸಿನಿಮಾ ಕಾರ್ಮಿಕರ ವೇತನ ಪರಿಷ್ಕರಣೆ ಸಮಿತಿಯಿಂದ ಹೊಸ ವೇತನ ವರದಿಯನ್ನು ರೂಪಿಸಿಲಾಗಿದ್ದು, ಸಮಿತಿ ಸೂಚಿಸಿರುವ ವರದಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘ ಸಂಪೂರ್ಣವಾಗಿ ಒಪ್ಪಿಗೆ ಸೂಚಿಸಿದೆ. ಆ ಮೂಲಕ ನಿರ್ಮಾಪಕರಿಗೆ ಹೊರೆ ಅನಿಸಿದರೂ ಚಿತ್ರೋದ್ಯಮದ ಕುಟುಂಬದ ಸದಸ್ಯರಾಗಿರುವ ಸಿನಿಮಾ ಕಾರ್ಮಿಕರಿಗೆ ಒಳ್ಳೆಯದಾಗಬೇಕು ಎನ್ನುವ ಆಲೋಚನೆಯಲ್ಲಿ ಕಾರ್ಮಿಕರ ಎಲ್ಲ ಬೇಡಿಕೆಗಳನ್ನು ಒಳಗೊಂಡಂತೆಯೇ ಹೊಸ ವೇತನ ಪರಿಷ್ಕರಣೆ ಮಾಡಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಸಿನಿಮಾ ಕಾರ್ಮಿಕರಿಗಾಗಿ ರೂಪಿಸಿರುವ ಹೊಸ ವೇತನದ ಕುರಿತು ನೀಡಿದ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್, ಮೂರು ತಿಂಗಳ ಕಾಲ ಹಲವು ಹಂತಗಳಲ್ಲಿ ಸಭೆಗಳನ್ನು ನಡೆಸುವ ಜತೆಗೆ ಹಲವರ ಅಭಿಪ್ರಾಯಗಳನ್ನು ಸಂಗ್ರಹಿಸಿ ನೀಡಿರುವ ವೇತನ ಪರಿಷ್ಕರಣಾ ವರದಿ ಅತ್ಯಂತ ಸಮಂಜಸವಾಗಿದೆ. ರಜೆ ಹಾಗೂ ಹಬ್ಬದ ದಿನಗಳಲ್ಲಿ ಕೆಲಸ ಮಾಡಿದರೆ ಸಂಬಳದ (ದಿನದ ವೇತನ) ಜತೆಗೆ ಹೆಚ್ಚುವರಿ ಕೆಲಸದ ಬಾಟಾ (ದಿನಗೂಲಿ), ಪ್ರಯಾಣದ ಬಾಟಾ ವೇತನದಲ್ಲಿ ಅರ್ಧ ಮಾತ್ರ ಕಡಿತ ಮಾಡಲಾಗಿದೆ. ಆದರೂ ಪೂರ್ತಿ ಬಾಟಾ ಕೋಡಲೇಬೇಕು ಎಂದು ಪಟ್ಟು ಹಿಡಿದಿರುವುವುದು ಸರಿಯಲ್ಲ. ದಿನದ ವೇತನ ಜತೆಗೆ ಪೂರ್ತಿ ಹೆಚ್ಚುವರಿ ಬಾಟಾ ಬದಲು ಅರ್ಧ ಕೂಲಿ ಕೊಡಲು ಸಮಿತಿ ಸೂಚಿಸಿದೆ. ನಿರ್ಮಾಪಕರಿಗೆ ಸ್ವಲ್ಪ ಹೊರೆಯಾದರೂ ನಿರ್ಮಾಪಕರು ಈ ಹೊಸ ವೇತನಕ್ಕೆ ಒಪ್ಪಿಕೊಂಡಿದ್ದಾರೆ. ಆದರೂ ಕೆಲವರು ದಿನದ ಬಾಟಾದಲ್ಲಿ ಕಡಿತ ಮಾಡಿದ್ದಾರೆ ಎಂದು ನೆಪ ಒಡ್ಡಿ ಹೊಸ ವೇತನಕ್ಕೆ ವಿರೋಧ ಮಾಡುತ್ತಿದ್ದಾರೆ. ಜತೆಗೆ ಶೂಟಿಂಗ್‌ನಲ್ಲಿರುವ ಸಿನಿಮಾಗಳ ಕೆಲಸಗಳನ್ನು ನಿಲ್ಲಿಸುತ್ತೇವೆ ಎಂದು ಬೆದರಿಸುತ್ತಿದ್ದಾರೆ. ಇದು ಸರಿಯಾದ ನಡೆ ಅಲ್ಲ. ಒಂದು ವೇಳೆ ಈ ಬೆದರಿಕೆ ವರ್ತನೆಗಳು ಮುಂದುವರಿದರೆ ಕಾನೂನು ವ್ಯಾಪ್ತಿಯ ಜತೆಗೆ ಚಿತ್ರರಂಗದ ನಿಯಮಗಳ ಪ್ರಕಾರ ನಾವೂ ಕೂಡ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮಾತನಾಡಿ, ಕೆ ಮಂಜು ಅವರ ಅಧ್ಯಕ್ಷತೆಯ ವೇತನ ಪರಿಷ್ಕರಣೆ ಸಮಿತಿ ನೀಡಿರುವ ವರದಿಗೆ ನಿರ್ಮಾಪಕರ ಸಂಘದ ಒಪ್ಪಿಗೆ ಇದೆ. ಈಗಿನಿಂದಲೇ ಹೊಸ ವೇತನ ಜಾರಿಯಾಗಲಿದೆ. ಯಾರಾದರೂ ಈ ಹೊಸ ವೇತನವನ್ನು ಉಲ್ಲಂಘಿಸುವುದು ಅಥವಾ ಚಿತ್ರೀಕರಣಕ್ಕೆ ತೊಂದರೆ ಕೊಟ್ಟರೆ ನಿರ್ಮಾಪಕರು ತೆಗೆದುಕೊಳ್ಳುವ ಸ್ವತಂತ್ರ ನಿರ್ಧಾರಗಳಿಂದ ಬರಬಹುದಾದ ಪರಿಣಾಮಗಳನ್ನು ಸಿನಿಮಾ ಕಾರ್ಮಿಕರೇ ಎದುರಿಸಬೇಕಾಗುತ್ತದೆ ಎಂದು ಪರೋಕ್ಷವಾಗಿ ಎಚ್ಚರಿಸಿದರು. ಹೊಸ ವೇತನ ಪರಿಷ್ಕರಣೆ ಸಮಿತಿ ಅಧ್ಯಕ್ಷ ಕೆ ಮಂಜು ಮಾತನಾಡಿ, ಮೂರು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುವುದು ಚಿತ್ರೋದ್ಯಮದ ವಾಡಿಕೆ. ಕೊರೋನಾದಿಂದ ಕಳೆದ ನಾಲ್ಕು ವರ್ಷಗಳಿಂದ ಸಿನಿಮಾ ಕಾರ್ಮಿಕರಿಗೆ ವೇತನ ಪರಿಷ್ಕರಣೆ ಆಗಿಲ್ಲ. ನಿರ್ಮಾಪಕರಿಗೆ ಏನೇ ಕಷ್ಟ ಇದ್ದರೂ ಕಾರ್ಮಿಕರಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಮೂರು ತಿಂಗಳ ಕಾಲ ಕೆಲಸ ಮಾಡಿ 30ಕ್ಕೂ ಹೆಚ್ಚು ಸಭೆ, ಚಿತ್ರರಂಗದ ದಿಗ್ಗಜರ, ಚಿತ್ರೋದ್ಯಮದ ಸಂಘ- ಸಂಸ್ಥೆಗಳ ಅಭಿಪ್ರಾಯಗಳನ್ನು ತೆಗೆದುಕೊಂಡೇ ನಾವು ಹೊಸ ವೇತನ ಪರಿಷ್ಕರಣೆ ಮಾಡಿದ್ದೇವೆ. ರಜೆ ದಿನಗಳಲ್ಲೂ ಕೆಲಸ ಕೊಡುತ್ತಿದ್ದೇವೆ. ಸಂಬಳ ಜತೆಗೆ ಅರ್ಧ ಕೂಲಿಯೂ ಹೆಚ್ಚುವರಿಯಾಗಿ ಕೊಡುತ್ತಿದ್ದೇವೆ. ಹೀಗಾಗಿ ನಾವು ರೂಪಿಸಿರುವ ಹೊಸ ವೇತನ ಪರಿಷ್ಕರಣೆ ವರದಿ ಅತ್ಯಂತ ವೈಜ್ಞಾನಿಕವಾಗಿದೆ. ಚಿತ್ರರಂಗ ತುಂಬಾ ಕಷ್ಟದಲ್ಲಿದೆ. ನಿರ್ಮಾಪಕರಿಗೆ ಹಾಕಿದ ಹಣ ವಾಪಸ್ಸು ಬರುತ್ತದೋ ಇಲ್ಲವೋ ಎನ್ನುವ ಗ್ಯಾರಂಟಿ ಇಲ್ಲ. ಆದರೂ ನಾವು ಎಲ್ಲರಿಗೂ ಹಣ ಪಾವತಿ ಮಾಡಿಯೇ ಕೆಲಸ ಮಾಡಿಸುತ್ತಿದ್ದೇವೆ’ ಎಂದರು. ವೇತನ ಪರಿಷ್ಕರಣೆ ಸಮಿತಿ ಸದಸ್ಯ ದಯಾಳ್‌ ಪದ್ಮನಾಭನ್‌ ಮಾತನಾಡಿ, ‘ನಾಲ್ಕು ವರ್ಷಗಳಿಂದ ವೇತನ ಪರಿಷ್ಕರಣೆ ಮಾಡಿಲ್ಲ. ಆ ನಾಲ್ಕು ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ವರ್ಷಕ್ಕೆ ಶೇ.5ರಂತೆ ನಾಲ್ಕು ವರ್ಷಗಳನ್ನು ಸೇರಿಸಿ ಶೇ.20ರಷ್ಟು ವೇತನ ಹೆಚ್ಚಳ ಮಾಡಿದ್ದೇವೆ. ಇದರಿಂದ ಚಿತ್ರರಂಗದ ಆಯಾ ವಿಭಾಗಗಳಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ಕಾರ್ಮಿಕರಿಗೆ ಶೇ.45 ರಿಂದ 70ರಷ್ಟು ವೇತನ ಹೆಚ್ಚಳವಾಗಲಿದೆ’ ಎಂದು ತಿಳಿಸಿದರು.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon